
Lingaraj Badiger
Chief Content Editor at Kannada Prabha
Chief Content [email protected]
Articles
-
1 week ago |
kannadaprabha.com | Lingaraj Badiger
ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು, ಶನಿವಾರ ಸಕ್ರಿಯ COVID-19 ಪ್ರಕರಣಗಳ ಸಂಖ್ಯೆ 3,000 ಗಡಿ ದಾಟಿದೆ. ಕೇರಳದಲ್ಲಿ ಅತಿ ಹೆಚ್ಚು 1,336 ಪ್ರಕರಣಗಳು, ನಂತರ ಮಹಾರಾಷ್ಟ್ರ ಮತ್ತು ದೆಹಲಿ ಹೆಚ್ಚು ಪ್ರಕರಣಗಳು ವರದಿಯಾಗಿವೆ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ನಾಲ್ಕು ಸಾವುಗಳು ವರದಿಯಾಗಿದ್ದು, ದೆಹಲಿ, ಕೇರಳ, ಕರ್ನಾಟಕ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಒಬ್ಬರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಸೋಂಕಿನ ತೀವ್ರತೆ ಕಡಿಮೆಯಾಗಿದೆ, ಹೆಚ್ಚಿನ ರೋಗಿಗಳು ಮನೆಯ ಆರೈಕೆಯಲ್ಲಿದ್ದಾರೆ.
-
1 week ago |
kannadaprabha.com | Lingaraj Badiger
ನವದೆಹಲಿ: ಪಾಕಿಸ್ತಾನದೊಂದಿಗಿನ ನಾಲ್ಕು ದಿನಗಳ ಸೇನಾ ಸಂಘರ್ಷದಲ್ಲಿ ಭಾರತ ಎಷ್ಟು ಜೆಟ್ ಗಳನ್ನು ಕಳೆದುಕೊಂಡಿದೆ ಎಂಬ ಬಗ್ಗೆ ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಶನಿವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಆಪರೇಷನ್ ಸಿಂಧೂರನಲ್ಲಿ ಭಾರತೀಯ ವಾಯುಪಡೆಯ ವಿಮಾನಗಳು ಧ್ವಂಸಗೊಂಡಿವೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಒಪ್ಪಿಕೊಂಡ ನಂತರ ಕಾಂಗ್ರೆಸ್ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಆದಾಗ್ಯೂ, ಜನರಲ್ ಚೌಹಾಣ್ ಅವರು ಆರು ಭಾರತೀಯ ಜೆಟ್ಗಳನ್ನು ಹೊಡೆದುರುಳಿಸಿದ ಪಾಕಿಸ್ತಾನದ ಹೇಳಿಕೆಯನ್ನು "ಸಂಪೂರ್ಣವಾಗಿ ತಪ್ಪು" ಎಂದು ತಳ್ಳಿಹಾಕಿದ್ದಾರೆ.
-
1 week ago |
kannadaprabha.com | Lingaraj Badiger
ತುಮಕೂರು: ತುಮಕೂರು ಜಿಲ್ಲೆಯ ಗುಬ್ಬಿ ಬಳಿ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕಾಲುವೆ ಯೋಜನೆ ವಿರೋಧಿಸಿ ರೈತ ಸಂಘಟನೆಗಳು, ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದವು. ನಂತರ ಜಿಲ್ಲಾಡಳಿತ ಯೋಜನಾ ಕಾರ್ಯವನ್ನು ಸ್ಥಗಿತಗೊಳಿಸುವುದಾಗಿ ಭರವಸೆ ನೀಡಿದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ಪ್ರತಿಭಟನೆಯಲ್ಲಿ ಶಾಸಕರಾದ ಬಿ ಸುರೇಶ್ ಗೌಡ, ಜಿ ಬಿ ಜ್ಯೋತಿ ಗಣೇಶ್ ಮತ್ತು ಎಂ ಟಿ ಕೃಷ್ಣಪ್ಪ ಅವರು ಭಾಗವಹಿಸಿದ್ದರು. ಅಲ್ಲದೆ ವಿವಿಧ ಧಾರ್ಮಿಕ ಮಠಗಳ ಮಠಾಧೀಶರು ಸಹ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಹೀಗಾಗಿ ಸ್ಥಳದಲ್ಲಿ ಭಾರೀ ಪೊಲೀಸ್ ನಿಯೋಜನೆ ಮಾಡಲಾಗಿತ್ತು.
-
1 week ago |
kannadaprabha.com | Lingaraj Badiger
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ಸವಲತ್ತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ. ಕೆಲವು ಸಾಹಿತಿಗಳು ಮಹೇಶ್ ಜೋಶಿ ಅವರ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದಿಂದ ಅವರನ್ನು ಕೆಳಗಿಳಿಸಬೇಕು ಎಂದು ಕೋರಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಅವರಿಗೆ ನೀಡಿದ್ದ ಸಚಿವ ಸ್ಥಾನಮಾನವನ್ನು ಹಿಂಪಡೆದಿದೆ. ನಾಡೋಜ ಡಾ.
-
1 week ago |
kannadaprabha.com | Lingaraj Badiger
ಬೆಂಗಳೂರು: ಮಕ್ಕಳ ತೀವ್ರ ಅಪೌಷ್ಟಿಕ ಪ್ರಮಾಣವನ್ನು ಪ್ರತಿ ವರ್ಷ ಕನಿಷ್ಠ ಶೇ.1 ರಷ್ಟು ಕಡಿಮೆ ಮಾಡಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಕ್ಕಳ ಅಪೌಷ್ಟಿಕತೆಯನ್ನು ಉಲ್ಲೇಖಿಸಿದ ಸಿಎಂ, ಸಾಮಾಜಿಕ ಸವಾಲುಗಳಿಂದಾಗಿ ಸಮಸ್ಯೆಯನ್ನು ರಾತ್ರೋರಾತ್ರಿ ತೊಡೆದುಹಾಕಲು ಸಾಧ್ಯವಾಗದಿದ್ದರೂ, ಜಿಲ್ಲೆಗಳು ಪ್ರತಿ ವರ್ಷ ಅಪೌಷ್ಟಿಕತೆ ಪ್ರಮಾಣವನ್ನು ಕನಿಷ್ಠ ಶೇ.1 ರಷ್ಟು ಕಡಿಮೆ ಮಾಡಲು ಕ್ರಮ ವಹಿಸಬೇಕು ಎಂದು ಹೇಳಿದರು.
Try JournoFinder For Free
Search and contact over 1M+ journalist profiles, browse 100M+ articles, and unlock powerful PR tools.
Start Your 7-Day Free Trial →X (formerly Twitter)
- Followers
- 9
- Tweets
- 142
- DMs Open
- No

RT @KannadaPrabha: ಕೇಂದ್ರ ಚುನಾವಣಾ ಆಯೋಗ ಬುಧವಾರ ಕರ್ನಾಟಕ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಿಸಿದ್ದು, ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಸುವುದಾಗಿ ....…

RT @KannadaPrabha: #ಕರ್ನಾಟಕ #ವಿಧಾನಸಭೆಚುನಾವಣೆ ದಿನಾಂಕ ನಿಗದಿ, ಮೇ 10 ಮತದಾನ. ಮೇ 13 ಫಲಿತಾಂಶ @ECISVEEP #ಬಳ್ಳಾರಿಮಹಾನಗರಪಾಲಿಕೆ: 23 ವರ್ಷದ ತ್ರಿವೇಣಿ ಮೇ…

RT @KannadaPrabha: ಹಿಂದೂ 'ಅಶ್ಲೀಲ' ಹೇಳಿಕೆ ಹಿಂಪಡೆದು ವಿಷಾದ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ @narendramodi ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವ…