
Lingaraj Badiger
Chief Content Editor at Kannada Prabha
Chief Content [email protected]
Articles
-
1 week ago |
kannadaprabha.com | Lingaraj Badiger
ಬೆಂಗಳೂರು: ಮಹಿಳೆಯೊಬ್ಬರಿಗೆ ಬ್ಲ್ಯಾಕ್ಮೇಲ್ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಕೇರಳದ ಅರ್ಚಕರೊಬ್ಬರನ್ನು ಬಂಧಿಸಿದ್ದಾರೆ ಮತ್ತು ತಲೆಮರೆಸಿಕೊಂಡಿರುವ ಮತ್ತೊಬ್ಬ ಅರ್ಚಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಬಂಧಿತ ವ್ಯಕ್ತಿಯನ್ನು ಕೇರಳದಲ್ಲಿರುವ ಪೆರಿಂಗೊಟ್ಟುಕರ ದೇವಸ್ಥಾನದ ಅರುಣ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಾಲಯದ ಪ್ರಧಾನ ಅರ್ಚಕ ಉನ್ನಿ ದಾಮೋದರನ್ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
-
1 week ago |
kannadaprabha.com | Lingaraj Badiger
ದಾವಣಗೆರೆ: ನಮ್ಮ ಸರ್ಕಾರದ ಮುಂಬರುವ ಸಾಮಾಜಿಕ-ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆಯು ಕೇಂದ್ರದ ಜಾತಿ ಗಣತಿಗಿಂತ ಸಂಪೂರ್ಣ ಭಿನ್ನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ರಾಜ್ಯದ ಈ ಉಪಕ್ರಮವು ಸಾಮಾಜಿಕ ನ್ಯಾಯ ಒದಗಿಸುತ್ತದೆ ಎಂದು ಒತ್ತಿ ಹೇಳಿದ್ದಾರೆ. ಕೇಂದ್ರ ಸರ್ಕಾರ 16ನೇ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಮಾರ್ಚ್ 1, 2027 ರಿಂದ ಆರಂಭಿಸುವುದಾಗಿ ಅಧಿಸೂಚನೆ ಹೊರಡಿಸಿದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಕೇಂದ್ರ ಸರ್ಕಾರ ಜನಗಣತಿಯನ್ನು 2027 ರಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ.
-
1 week ago |
kannadaprabha.com | Lingaraj Badiger
ಅಹಮದಾಬಾದ್ನ ಸಿವಿಲ್ ಆಸ್ಪತ್ರೆಯಲ್ಲಿದ್ದ ರೂಪಾನಿ ಅವರ ಪಾರ್ಥಿವ ಶರೀರವನ್ನು ಹೊತ್ತೊಯ್ಯುವ ವಾಹನಕ್ಕೆ 2,000 ಕೆ.ಜಿ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು ಮತ್ತು ಮೃತದೇಹದ ಮೇಲೆ ತ್ರಿವರ್ಣ ಧ್ವಜ ಹೊದಿಸಲಾಗಿತ್ತು. ಜೂನ್ 12ರಂದು ಲಂಡನ್ಗೆ ಹಾರುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನ ಅವಘಡದಲ್ಲಿ ಸಾವನ್ನಪ್ಪಿದ 241 ಪ್ರಯಾಣಿಕರ ಪೈಕಿ ರೂಪಾನಿ ಕೂಡಾ ಒಬ್ಬರು. ಡಿಎನ್ಎ ಪರೀಕ್ಷೆ ಮೂಲಕ ಅವರ ಮೃತದೇಹವನ್ನು ಪತ್ತೆ ಮಾಡಿರುವ ಕುರಿತು ನಿನ್ನೆ ಆಸ್ಪತ್ರೆ ಅಧಿಕಾರಿಗಳು ದೃಢಪಡಿಸಿದ್ದರು.
-
1 week ago |
kannadaprabha.com | Lingaraj Badiger
ನಿಕೋಸಿಯಾ: ಸೈಪ್ರಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಆಫ್ ಸೈಪ್ರಸ್ ಅನ್ನು ಪ್ರದಾನ ಮಾಡಲಾಯಿತು. ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಪ್ರಧಾನಿ ಮೋದಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ನೀಡಿ ಗೌರವಿಸಿದರು. "ಸೈಪ್ರಸ್ನ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III' ಅನ್ನು ನಮ್ರತೆ ಮತ್ತು ಕೃತಜ್ಞತೆಯಿಂದ ಸ್ವೀಕರಿಸುತ್ತೇನೆ.
-
1 week ago |
kannadaprabha.com | Lingaraj Badiger
ಮುಂಬೈ: ಹಾಂಗ್ ಕಾಂಗ್ ನಿಂದ ಸೋಮವಾರ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಪೈಲಟ್, ತಾಂತ್ರಿಕ ದೋಷದ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಮಧ್ಯದ್ಯದಲ್ಲಿಯೇ ವಾಪಸ್ ಆಗಿ ಹಾಂಗ್ ಕಾಂಗ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನವು ಹಾಂಗ್ ಕಾಂಗ್ ನಲ್ಲಿ ಸುರಕ್ಷಿತವಾಗಿ ಇಳಿಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಮತ್ತು ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ವಿಮಾನವು ಹಾಂಗ್ ಕಾಂಗ್ ನಿಂದ ಬೆಳಗ್ಗೆ 9.50ಕ್ಕೆ(ಭಾರತೀಯ ಕಾಲಮಾನ) ಟೇಕಾಫ್ ಆಯಿತು ಮತ್ತು ದೆಹಲಿಯಲ್ಲಿ ಇಂದು ಮಧ್ಯಾಹ್ನ 12: 20ಕ್ಕೆ ಲ್ಯಾಂಡ್ ಆಗಬೇಕಿತ್ತು.
Try JournoFinder For Free
Search and contact over 1M+ journalist profiles, browse 100M+ articles, and unlock powerful PR tools.
Start Your 7-Day Free Trial →X (formerly Twitter)
- Followers
- 9
- Tweets
- 142
- DMs Open
- No

RT @KannadaPrabha: ಕೇಂದ್ರ ಚುನಾವಣಾ ಆಯೋಗ ಬುಧವಾರ ಕರ್ನಾಟಕ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಿಸಿದ್ದು, ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಸುವುದಾಗಿ ....…

RT @KannadaPrabha: #ಕರ್ನಾಟಕ #ವಿಧಾನಸಭೆಚುನಾವಣೆ ದಿನಾಂಕ ನಿಗದಿ, ಮೇ 10 ಮತದಾನ. ಮೇ 13 ಫಲಿತಾಂಶ @ECISVEEP #ಬಳ್ಳಾರಿಮಹಾನಗರಪಾಲಿಕೆ: 23 ವರ್ಷದ ತ್ರಿವೇಣಿ ಮೇ…

RT @KannadaPrabha: ಹಿಂದೂ 'ಅಶ್ಲೀಲ' ಹೇಳಿಕೆ ಹಿಂಪಡೆದು ವಿಷಾದ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ @narendramodi ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವ…