
Articles
-
4 days ago |
kannadaprabha.com | Manjula VN
ಬೆಂಗಳೂರು: ಭಾರತದ ಬಾಹ್ಯಾಕಾಶ ಯಾನದಲ್ಲಿ ಒಂದು ದೊಡ್ಡ ಮತ್ತು ಐತಿಹಾಸಿಕ ದಿನ ಕೊನೆಗೂ ಹತ್ತಿರ ಬಂದಿದ್ದು, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಬುಧವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಲಿದ್ದಾರೆ. ಜೂನ್ 25ರಂದು ಆಕ್ಸಿಯಮ್-4 ಮಿಷನ್ ಉಡಾವಣೆ ಮಾಡಲಾಗುವುದು ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ನೇತೃತ್ವದ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆ ಜೂನ್ 25 ರಂದು ಉಡಾವಣೆಗೊಳ್ಳಲಿದೆ ಎಂದು ನಾಸಾ ಮತ್ತು ಸ್ಪೇಸ್ಎಕ್ಸ್ ಜಂಟಿಯಾಗಿ ಭರವಸೆ ನೀಡಿದೆ.
-
4 days ago |
kannadaprabha.com | Manjula VN
ಬೆಂಗಳೂರು: ನಗರದ ಎಲ್ಲಾ ಫುಟ್ ಪಾತ್ ಅಂಗಡಿಗಳನ್ನು ತೆರವುಗೊಳಿಸಿ, ಗೊತ್ತುಪಡಿಸಿದ ಸ್ಥಳದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡುತ್ತೇವೆಂಬ ಸರ್ಕಾರದ ನಿರ್ಣಯಕ್ಕೆ ಬೀದಿ ಬದಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಲು ಮುಂದಾಗಿವೆ. ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ವಿರುದ್ಧ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ಕಿಡಿಕಾರಿದ್ದು, ನಗರದ ಫ್ರೀಡಂ ಪಾರ್ಕ್ ನಲ್ಲಿ ಮಂಗಳವಾರ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಪ್ರತಿಭಟನೆಯಲ್ಲಿ ಕೆ.ಆರ್.
-
4 days ago |
kannadaprabha.com | Manjula VN
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯ ನಡೆಸುತ್ತಿರುವ ಕುರಿತು ಖಾತರಿ ಪಡಿಸಿಕೊಳ್ಳಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸುವ ಕಾರ್ಯ ಸೋಮವಾರದಿಂದ ಆರಂಭವಾಗಿದೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳಿಗೆ ಸೇರಿದವರ ವೈಜ್ಞಾನಿಕ ದತ್ತಾಂಶವನ್ನು ಸಂಗ್ರಹಿಸಲಾಗುತ್ತಿದ್ದು, ಜೂನ್ 30ರವರೆಗೆ ಕಾಲಾವಕಾಶವಿದೆ. ನಗರದಾದ್ಯಂತ ಸಮೀಕ್ಷಾ ಕಾರ್ಯ ನಡೆಯುತ್ತಿದ್ದು, ಪ್ರತಿ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಿರುವ ಕುರಿತು ಖಾತರಿಪಡಿಸಿಕೊಂಡು ಸ್ಟಿಕರ್ ಅಂಟಿಸಲಾಗುತ್ತದೆ.
-
4 days ago |
kannadaprabha.com | Manjula VN
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಕೊಲೆಗಳು ಮತ್ತು ಅತ್ಯಾಚಾರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಗೆ ಬಂದು ಶರಣಾಗುತ್ತೇನೆಂದು ವ್ಯಕ್ತಿಯೊಬ್ಬ ಬರೆದಿರುವ ಪತ್ರ ವೈರಲ್ ಆಗಿದೆ. ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್.
-
4 days ago |
kannadaprabha.com | Manjula VN
ವಾಷಿಂಗ್ಟನ್: ಇಸ್ರೇಲ್ ಮತ್ತು ಇರಾನ್ ರಾಷ್ಟ್ರಗಳ ನಡುವಿನ ಯುದ್ಧ ಕೊನೆಗೂ ಮುಕ್ತಾಯವಾಗಿದ್ದು, ಉಭಯ ದೇಶಗಳ ನಡುವೆ ಕದನ ವಿರಾಮ ಜಾರಿಗೆ ಬಂದಿದೆ ಎಂದು ಟೆಹ್ರಾನ್ ಖಚಿತ ಪಡಿಸಿದೆ. ಇಂದು ಬೆಳಿಗ್ಗೆ ಸಾಮಾಜಿಕ ಜಾಲತಾಣ ಟ್ರುತ್ ನಲ್ಸಿ ಪೋಸ್ಟ್ ಮಾಡಿದ್ದ ಟ್ರಂಪ್ ಅವರು, ಎಲ್ಲರಿಗೂ ಅಭಿನಂದನೆಗಳು. ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಇಸ್ರೇಲ್ ಮತ್ತು ಇರಾನ್ ತಮ್ಮ ಅಂತಿಮ ಕಾರ್ಯಾಚರಣೆಗಳನ್ನು ಮುಗಿಸಿದ ನಂತರ, ಸುಮಾರು 6 ಗಂಟೆಗಳಲ್ಲಿ ಕದನ ವಿರಾಮ ಪ್ರಾರಂಭವಾಗುತ್ತದೆ. 12 ಗಂಟೆಗಳ ಕಾಲ ಇದು ನಡೆಯುತ್ತದೆ. ನಂತರ ಯುದ್ಧವು ಮುಕ್ತಾಯವಾಗುತ್ತದೆ ಎಂದು ಹೇಳಿದ್ದರು.
Try JournoFinder For Free
Search and contact over 1M+ journalist profiles, browse 100M+ articles, and unlock powerful PR tools.
Start Your 7-Day Free Trial →