
Articles
-
4 days ago |
kannadaprabha.com | Nagaraja AB
ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಗಾಲ್ಫ್ ಮೈದಾನದ ರಸ್ತೆಯಲ್ಲಿರುವ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಪರ ಹೋರಾಟಗಾರ ಹಾಗೂ ಬಿಗ್ ಬಾಸ್ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ರೂಪೇಶ್ ರಾಜಣ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ. ವಸತಿ ಇಲಾಖೆಯಲ್ಲಿ ನಡೆಯುತ್ತಿದ್ದ ಅಕ್ರಮಗಳ ಬಗ್ಗೆ ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ್ ಅವರ ಆಡಿಯೋ ವೈರಲ್ ಆಗಿತ್ತು. ಇದರಲ್ಲಿ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ವಿರುದ್ಧ ಆರೋಪ ಮಾಡಿದ್ದರು. ಇದನ್ನು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದರು.
-
4 days ago |
kannadaprabha.com | Nagaraja AB
ತಿರುಪತಿ: ಆಂಧ್ರ ಪ್ರದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆರಳುವ ಭಕ್ತರಿಗೆ ಮತ್ತೊಂದು ಖುಷಿ ವಿಚಾರ ಸಿಕ್ಕಿದೆ. ಟಿಟಿಡಿ ಇತ್ತೀಚೆಗೆ ತಿರುಮಲದಲ್ಲಿ ಲಡ್ಡು ಮಾರಾಟ ಮಳಿಗೆಗಳನ್ನು ಪರಿಚಯಿಸಿದೆ. ಭಕ್ತರು UPI ಪಾವತಿ ಮೂಲಕ ಹೆಚ್ಚುವರಿ ಲಡ್ಡು ಪಡೆಯಲು ಅನುಕೂಲ ಮಾಡಿಕೊಡಲಾಗಿದೆ. ಪಾವತಿ ನಂತರ ದೊರೆಯುವ ರಶೀದಿಯೊಂದಿಗೆ ಹೆಚ್ಚುವರಿ ಲಡ್ಡುಗಳನ್ನು ಭಕ್ತರು ಪಡೆಯಬಹುದಾಗಿದೆ. ಭಕ್ತರು ಲಡ್ಡುಗಾಗಿ ಉದ್ದವಾದ ಸರತಿ ಸಾಲಿನಲ್ಲಿ ಧೀರ್ಘ ಹೊತ್ತು ಕಾಯುವುದನ್ನು ತಪ್ಪಿಸುವುದು ಇದರ ಉದ್ದೇಶವಾಗಿದೆ. ಭಕ್ತರು ಇಂಟರ್ಫೇಸ್ನ ಮೂಲಕ ಮಾರಾಟ ಮಳಿಗೆಗಳಲ್ಲಿ ತ್ವರಿತವಾಗಿ ಲಡ್ಡು ಸಂಗ್ರಹಿಸಬಹುದು.
-
4 days ago |
kannadaprabha.com | Nagaraja AB
ಜೆರುಸೆಲೆಂ: ಇಸ್ರೇಲ್ ಹಾಗೂ ಇರಾನ್ ನಡುವಣ ಸಂಘರ್ಷ, ಮಿಲಿಟರಿ ಕಾರ್ಯಾಚರಣೆಯಿಂದ ಕಳೆದ 12 ದಿನಗಳಿಂದ ಮಧ್ಯ ಪ್ರಾಚ್ಯದಲ್ಲಿ ಉಂಟಾಗಿದ್ದ ಯುದ್ಧ ಕೊನೆಗೂ ಅಂತ್ಯವಾಗಿದೆ. ಕತಾರ್ ನಲ್ಲಿ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಇರಾನ್ ಪ್ರತೀಕಾರದ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿದ ಕದನ ವಿರಾಮ ಒಪ್ಪಂದ ಸೂತ್ರವನ್ನು ಇಸ್ರೇಲ್ ಹಾಗೂ ಇರಾನ್ ಮಂಗಳವಾರ ಒಪ್ಪಿಕೊಂಡಿವೆ.
-
4 days ago |
kannadaprabha.com | Nagaraja AB
ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ ರಾಷ್ಟ್ರ ರಾಜಧಾನಿಯ ವಿಮಾನ ನಿಲ್ದಾಣದಲ್ಲಿ ಕಳೆದ ರಾತ್ರಿಯಿಂದ ವಿಮಾನಗಳ ಕಾರ್ಯಾಚರಣೆಯಲ್ಲಿ ತೀವ್ರ ಪರಿಣಾಮ ಬೀರಿದ್ದು, 48 ವಿಮಾನಗಳ ಸಂಚಾರ ರದ್ದು ಆಗಿದೆ ಎಂದು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ದೆಹಲಿಯಿಂದ ಹೊರಡಬೇಕಾಗಿದ್ದ ಏರ್ ಇಂಡಿಯಾ ಹಾಗೂ ಇಂಡಿಗೊ ವಿಮಾನಯಾನ ಸಂಸ್ಥೆಗಳ 20 ವಿಮಾನಗಳು ಹಾಗೂ ಆಗಮಿಸಬೇಕಾಗಿದ್ದ 28 ವಿಮಾನಗಳ ಸೇವೆ ರದ್ದುಗೊಂಡಿದ್ದು, ಕಂಪನಿಗಳು ನಷ್ಟ ಅನುಭವಿಸುವಂತಾಗಿದೆ. ಏರ್ ಇಂಡಿಯಾದ 17 ಆಗಮನ ಮತ್ತು 10 ನಿರ್ಗಮನ ವಿಮಾನಗಳು ಸೇರಿದಂತೆ ಒಟ್ಟಾರೇ 25 ವಿಮಾನಗಳ ಹಾರಾಟ ರದ್ದುಗೊಂಡಿದೆ.
-
4 days ago |
kannadaprabha.com | Nagaraja AB
ಟೆಹರಾನ್: ಇಸ್ರೇಲ್ ವಿರುದ್ಧದ ಸಂಘರ್ಷವನ್ನು ಕೊನೆಗಾಣಿಸಿ ಕದನ ವಿರಾಮ ಒಪ್ಪಂದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಗಡುವಿಗೆ ಡೊಂಟ್ ಕೇರ್ ಎನ್ನದ ಇರಾನ್ ಇದೀಗ ತಾನೇ ಗಡುವು ನೀಡಿದೆ. ಬೆಳಗ್ಗೆ 4 ಗಂಟೆಯೊಳಗೆ ಇಸ್ರೇಲ್ ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವಂತೆ ಟೆಹರಾನ್ ಅಂತಿಮ ಡೆಡ್ ಲೈನ್ ನೀಡಿದೆ. ''ಇರಾನ್ ಪದೇ ಪದೇ ಸ್ಪಷ್ಪಪಡಿಸುತ್ತಿದೆ. ಇರಾನ್ ಮೇಲೆ ಯುದ್ಧ ಶುರು ಮಾಡಿರುವುದು ಇಸ್ರೇಲ್ ಆಗಿದ್ದು, ನಮ್ಮಗೆ ಬೇರೆ ದಾರಿಯಿಲ್ಲ. ಈಗ ಯಾವುದೇ ಕದನ ವಿರಾಮ ಒಪ್ಪಂದ ಅಥವಾ ಮಿಲಿಟರಿ ಕಾರ್ಯಾಚರಣೆ ಸ್ಥಗಿತಕ್ಕೆ ಒಪ್ಪಂದ ಆಗಿಲ್ಲ' ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ತಿಳಿಸಿದ್ದಾರೆ.
Try JournoFinder For Free
Search and contact over 1M+ journalist profiles, browse 100M+ articles, and unlock powerful PR tools.
Start Your 7-Day Free Trial →