Outlet metrics

Domain Authority
47
Ranking

Global

#17775

India

#1330

News and Media

#118

Traffic sources
Monthly visitors

Articles

  • 4 days ago | kannadaprabha.com | Nagaraja AB

    ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಗಾಲ್ಫ್ ಮೈದಾನದ ರಸ್ತೆಯಲ್ಲಿರುವ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಪರ ಹೋರಾಟಗಾರ ಹಾಗೂ ಬಿಗ್ ಬಾಸ್ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ರೂಪೇಶ್ ರಾಜಣ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ. ವಸತಿ ಇಲಾಖೆಯಲ್ಲಿ ನಡೆಯುತ್ತಿದ್ದ ಅಕ್ರಮಗಳ ಬಗ್ಗೆ ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ್ ಅವರ ಆಡಿಯೋ ವೈರಲ್ ಆಗಿತ್ತು. ಇದರಲ್ಲಿ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ವಿರುದ್ಧ ಆರೋಪ ಮಾಡಿದ್ದರು. ಇದನ್ನು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದರು.

  • 4 days ago | kannadaprabha.com | Manjula VN

    ಬೆಂಗಳೂರು: ಭಾರತದ ಬಾಹ್ಯಾಕಾಶ ಯಾನದಲ್ಲಿ ಒಂದು ದೊಡ್ಡ ಮತ್ತು ಐತಿಹಾಸಿಕ ದಿನ ಕೊನೆಗೂ ಹತ್ತಿರ ಬಂದಿದ್ದು, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಬುಧವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಲಿದ್ದಾರೆ. ಜೂನ್ 25ರಂದು ಆಕ್ಸಿಯಮ್-4 ಮಿಷನ್ ಉಡಾವಣೆ ಮಾಡಲಾಗುವುದು ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ನೇತೃತ್ವದ‌ ಆಕ್ಸಿಯಮ್‌-4 ಬಾಹ್ಯಾಕಾಶ ಯೋಜನೆ ಜೂನ್ 25 ರಂದು ಉಡಾವಣೆಗೊಳ್ಳಲಿದೆ ಎಂದು ನಾಸಾ ಮತ್ತು ಸ್ಪೇಸ್‌ಎಕ್ಸ್‌ ಜಂಟಿಯಾಗಿ ಭರವಸೆ ನೀಡಿದೆ.

  • 4 days ago | kannadaprabha.com | Nagaraja AB

    ತಿರುಪತಿ: ಆಂಧ್ರ ಪ್ರದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆರಳುವ ಭಕ್ತರಿಗೆ ಮತ್ತೊಂದು ಖುಷಿ ವಿಚಾರ ಸಿಕ್ಕಿದೆ. ಟಿಟಿಡಿ ಇತ್ತೀಚೆಗೆ ತಿರುಮಲದಲ್ಲಿ ಲಡ್ಡು ಮಾರಾಟ ಮಳಿಗೆಗಳನ್ನು ಪರಿಚಯಿಸಿದೆ. ಭಕ್ತರು UPI ಪಾವತಿ ಮೂಲಕ ಹೆಚ್ಚುವರಿ ಲಡ್ಡು ಪಡೆಯಲು ಅನುಕೂಲ ಮಾಡಿಕೊಡಲಾಗಿದೆ. ಪಾವತಿ ನಂತರ ದೊರೆಯುವ ರಶೀದಿಯೊಂದಿಗೆ ಹೆಚ್ಚುವರಿ ಲಡ್ಡುಗಳನ್ನು ಭಕ್ತರು ಪಡೆಯಬಹುದಾಗಿದೆ. ಭಕ್ತರು ಲಡ್ಡುಗಾಗಿ ಉದ್ದವಾದ ಸರತಿ ಸಾಲಿನಲ್ಲಿ ಧೀರ್ಘ ಹೊತ್ತು ಕಾಯುವುದನ್ನು ತಪ್ಪಿಸುವುದು ಇದರ ಉದ್ದೇಶವಾಗಿದೆ. ಭಕ್ತರು ಇಂಟರ್‌ಫೇಸ್‌ನ ಮೂಲಕ ಮಾರಾಟ ಮಳಿಗೆಗಳಲ್ಲಿ ತ್ವರಿತವಾಗಿ ಲಡ್ಡು ಸಂಗ್ರಹಿಸಬಹುದು.

  • 4 days ago | kannadaprabha.com | Nagaraja AB

    ಜೆರುಸೆಲೆಂ: ಇಸ್ರೇಲ್ ಹಾಗೂ ಇರಾನ್ ನಡುವಣ ಸಂಘರ್ಷ, ಮಿಲಿಟರಿ ಕಾರ್ಯಾಚರಣೆಯಿಂದ ಕಳೆದ 12 ದಿನಗಳಿಂದ ಮಧ್ಯ ಪ್ರಾಚ್ಯದಲ್ಲಿ ಉಂಟಾಗಿದ್ದ ಯುದ್ಧ ಕೊನೆಗೂ ಅಂತ್ಯವಾಗಿದೆ. ಕತಾರ್ ನಲ್ಲಿ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಇರಾನ್ ಪ್ರತೀಕಾರದ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿದ ಕದನ ವಿರಾಮ ಒಪ್ಪಂದ ಸೂತ್ರವನ್ನು ಇಸ್ರೇಲ್ ಹಾಗೂ ಇರಾನ್ ಮಂಗಳವಾರ ಒಪ್ಪಿಕೊಂಡಿವೆ.

  • 4 days ago | kannadaprabha.com | Manjula VN

    ಬೆಂಗಳೂರು: ನಗರದ ಎಲ್ಲಾ ಫುಟ್ ಪಾತ್ ಅಂಗಡಿಗಳನ್ನು ತೆರವುಗೊಳಿಸಿ, ಗೊತ್ತುಪಡಿಸಿದ ಸ್ಥಳದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡುತ್ತೇವೆಂಬ ಸರ್ಕಾರದ ನಿರ್ಣಯಕ್ಕೆ ಬೀದಿ ಬದಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಲು ಮುಂದಾಗಿವೆ. ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ವಿರುದ್ಧ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ಕಿಡಿಕಾರಿದ್ದು, ನಗರದ ಫ್ರೀಡಂ ಪಾರ್ಕ್ ನಲ್ಲಿ ಮಂಗಳವಾರ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಪ್ರತಿಭಟನೆಯಲ್ಲಿ ಕೆ.ಆರ್.

Kannada Prabha journalists