Outlet metrics

Domain Authority
47
Ranking

Global

#23668

India

#1768

News and Media

#122

Traffic sources
Monthly visitors

Articles

  • 6 days ago | kannadaprabha.com | Manjula VN

    ಕಲಬುರಗಿ: ಕಲಬುರಗಿ ಜಿಲ್ಲಾಡಳಿತ ಮಂಡಳಿಯು ಜಿಲ್ಲೆಯಲ್ಲಿ ರೊಟ್ಟಿಗಳನ್ನು ತಯಾರಿಸಲು ಒಂದೂವರೆ ವರ್ಷದ ಹಿಂದೆ ಪ್ರಾರಂಭಿಸಲಾದ ಉಪಕ್ರಮವೊಂದು ಇಲ್ಲಿನ ಮಹಿಳೆಯರ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದು, ಇಂದು ಜಿಲ್ಲೆಯ ನೂರಾರು ಮಹಿಳೆಯರು ಉದ್ಯಮಿಗಳಾಗಿ ಪರಿವರ್ತನೆಗೊಂಡಿದ್ದಾರೆ. ಸಿರಿಧಾನ್ಯಗಳ ರಾಜ ಎಂದೇ ಕರೆಯಲಾಗುವ ಜೋಳದಿಂದ ಮಾಡಿದ 'ಕಲಬುರಗಿ ರೊಟ್ಟಿ' ಈಗ ಆರೋಗ್ಯ ಪ್ರಜ್ಞೆಯುಳ್ಳವರ ಪ್ರಮುಖ ಆದ್ಯತೆ ಹಾಗೂ ಆಯ್ಕೆಯಾಗಿ ಮಾರ್ಪಟ್ಟಿದೆ. ಕಲಬುರಗಿ ರೊಟ್ಟಿ ಉತ್ಪಾದಕರ ಸಹಕಾರ ಸಂಘ (ಕಲಬುರಗಿ ರೊಟ್ಟಿ ಉತ್ಪಾದಕರ ಸಹಕಾರ ಸಂಘ) ತಯಾರಿಸಿ ಮಾರಾಟ ಮಾಡುವ ಈ ರೊಟ್ಟಿಗಳು ಇಂದು ಹಲವರ ಗಮನ ಸೆಳೆದಿದೆ.

  • 6 days ago | kannadaprabha.com | Manjula VN

    ಗದಗ: ಇಲ್ಲೊಬ್ಬ ಶಾಸಕರು ವೈದ್ಯ ಹಾಗೂ ಶಿಕ್ಷಕರೂ ಆಗಿದ್ದು, ಇದು ಗದಗಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಜನರಿಗೆ ವರದಾನವಾಗಿ ಪರಿಣಮಿಸಿದೆ. ಸರ್ಕಾರಿ ತಾಲ್ಲೂಕು ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್ ವೈದ್ಯರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಶಾಸಕ ಚಂದ್ರು ಲಮಾಣಿ ಅವರು ಕ್ಷೇತ್ರದ ಜನರಿಗೆ ಔಷಧಿಗಳನ್ನಷ್ಟೇ ಅಲ್ಲದೆ, ಶಿಕ್ಷಣಗ ಅಗತ್ಯತೆಗಳನ್ನೂ ತಿಳಿಸುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ಲಮಾಣಿ ಅವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಬೋಧನೆ ನೀಡುತ್ತಿದ್ದಾರೆ.

  • 6 days ago | kannadaprabha.com | Manjula VN

    ಬೆಂಗಳೂರು: ರಾಜ್ಯದಲ್ಲಿ ವೈಮಾನಿಕ ಸೌಲಭ್ಯ ವಿಸ್ತರಿಸುವುದು ಗುರಿ ಹೊಂದಿರುವ ರಾಜ್ಯ ಸರ್ಕಾರವು, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ತರಬೇತಿ ಸಂಸ್ಥೆ (FTO) ಸ್ಥಾಪಿಸಲು ಮುಂದಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ಅಧೀನದ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ) ನಿರ್ವಹಣೆ ಮಾಡುತ್ತಿದೆ. ಇದೇ ಸಂಸ್ಥೆ ಈಗ ವೈಮಾನಿಕ ತರಬೇತಿ ಸಂಸ್ಥೆ ಆರಂಭಿಸಲು ಟೆಂಡರ್‌ ಆಹ್ವಾನಿಸಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಎಫ್‌ಟಿಒ ಸ್ಥಾಪನೆಗಾಗಿ 3,500 ಚದರ ಮೀ. ವಿಸ್ತೀರ್ಣದ ಜಾಗ ನೀಡಲಾಗುತ್ತಿದ್ದು, ಅದರಲ್ಲಿ 1,500 ಚದರ ಮೀ.

  • 6 days ago | kannadaprabha.com | Manjula VN

    ಬೆಂಗಳೂರು: ನಮ್ಮ ಮೆಟ್ರೋ "ಬೆಂಗಳೂರಿನ ಜೀವನಾಡಿ"ಯಾಗಿದ್ದು, ಕಳೆದ ಎರಡು ವರ್ಷಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ ಹೇಳಿದರು. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ಮೆಟ್ರೋ ಯೋಜನೆ ಗಮನಾರ್ಹ ಪ್ರಗತಿ ಸಾಧಿಸಿದೆ, ನಗರದ ಪ್ರಮುಖ ಸಾರಿಗೆ ವಿಧಾನವಾಗಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ. ಮೆಟ್ರೋ ಜಾಲವನ್ನು ಬಲಪಡಿಸಲು, ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ಮಾದವರ (ಬಿಐಇಸಿ) ಯಿಂದ ತುಮಕೂರನ್ನು ಸಂಪರ್ಕಿಸುವ 52.41 ಕಿಮೀ ಮಾರ್ಗಕ್ಕೆ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸೂಚಿಸಲಾಗಿದೆ.

  • 6 days ago | kannadaprabha.com | Manjula VN

    ಬೆಂಗಳೂರು: ರೈತರ ಅತಿಯಾದ ರಸಾಯನಿಕ ಬಳಕೆಯಿಂದಾಗಿ ಮಣ್ಣಿನ ಫಲವತ್ತತೆ ಕುಸಿಯುತ್ತಿದ್ದು, ಶೇ.43ಕ್ಕಿಂತಲೂ ಹೆಚ್ಚು ಭೂಮಿ ನೈಸರ್ಗಿಕ ಇಂಗಾಲವನ್ನು ಕಳೆದುಕೊಂಡು ಬಂಜರು ಭೂಮಿಯಾಗಿ ಪರಿವರ್ತನೆಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕಳವಳ ವ್ಯಕ್ತಪಡಿಸಿದರು. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (ಡಿಸಿಗಳು) ಮತ್ತು ಎಲ್ಲಾ ಜಿಲ್ಲಾ ಪಂಚಾಯತ್‌ಗಳ ಸಿಇಒಗಳೊಂದಿಗೆ ಎರಡು ದಿನಗಳ ಪರಿಶೀಲನಾ ಸಭೆಯ ನಂತರ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದರು.

Kannada Prabha journalists